ನವದೆಹಲಿ: ಮಂಡ್ಯ ಭಾಗದ ರೈತರ ಬೆಳೆಗಳಿಗೆ ಅಗತ್ಯ ನೀರು ಬಿಡುವಂತೆ ಸಂಸದೆ ಸುಮಲತ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕೇಂದ್ರ ಸಚಿವರಾದ ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರನ್ನ ಭೇಟಿಯಾಗಿ ಮನವಿ ಮಾಡಿದ್ದಾರೆ.
ರೈತರಿಗೆ ಅಗತ್ಯವಿರುವ ಎರಡು ಟಿಎಂಸಿ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸುಮಲತಾ ಮನವಿ ಮಾಡಿಕೊಂಡಿದ್ದಾರೆ.
ಇನ್ನು ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ಮಧ್ಯಾಹ್ನ 3.30ರಿಂದ ಕಾವೇರಿ ನೀರು ನಿಯಂತ್ರಣ ಸಭೆ ನಡೆಸಲಾಗ್ತಿದೆ. ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಒಂದೇ ತಿಂಗಳಲ್ಲಿ ನಡೆಯುತ್ತಿರುವ ಎರಡನೇ ಸಭೆ ಇದಾಗಿದೆ.
ಮಾನ್ಸೂನ್ ಮಳೆ, ಜಲಾಶಯಗಳ ನೀರಿನ ಮಟ್ಟದ ಕುರಿತು ಚರ್ಚೆ ನಡೆಸಲಾಗ್ತಿದೆ. 9.19 ಟಿಎಂಸಿ ನೀರಿಗಾಗಿ ತಮಿಳುನಾಡು ಮತ್ತೆ ಪ್ರಸ್ತಾವನೆ ಇಡಲಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇದ್ರಿಂದಾಗಿ ಕಾವೇರಿ ಕೊಳ್ಳದಲ್ಲಿ ನೀರಿಲ್ಲದ ಕಾರಣ ರಾಜ್ಯಕ್ಕೆ ಜಲ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.