ಪ್ರಧಾನಿ ವಿರುದ್ಧ ವರುಣ್ ಗಾಂಧಿ ಕಿಡಿ

204

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಿವಾದಿತ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು. ಚಳಿಗಾಲದ ಅಧಿವೇಶನದಲ್ಲಿ ಅದನ್ನು ಸಂವಿಧಾನತ್ಮಕವಾಗಿ ವಾಪಸ್ ಪಡೆಯಲಾಗುವುದು ಎಂದು ಪ್ರಧಾನಿ ಮೋದಿ ಶುಕ್ರವಾರ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡುರುವ ಬಿಜೆಪಿ ಸಂಸದ ವರುಣ್ ಗಾಂಧಿ, ಈ ನಿರ್ಧಾರ ಮೊದಲೇ ತೆಗೆದುಕೊಂಡಿದ್ದರೆ ಹಲವು ರೈತರ ಪ್ರಾಣಗಳನ್ನು ಉಳಿಸಬಹುದಿತ್ತು ಎಂದಿದ್ದಾರೆ.

ಶನಿವಾರ ಪ್ರಧಾನಿಗೆ ಪತ್ರ ಬರೆದಿರುವ ವರುಣ್ ಗಾಂಧಿ, ಮೃತ ರೈತ ಕುಟುಂಬಗಳಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಹೋರಾಟಗಾರರ ವಿರುದ್ಧ ದಾಖಲಾಗಿರುವ ಸುಳ್ಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಇದರ ಜೊತೆಗೆ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಅಕ್ಟೋಬರ್ 3ರಂದು ಲಂಖೀಪುರದಲ್ಲಿ ನಡೆದ ಘಟನೆ ಸಂಬಂಧ, ಕೇಂದ್ರ ಸಚಿವ ಅಜಯ್ ಕುಮಾರ್ ಪುತ್ರ ಆಶಿಶ್ ಮಿಶ್ರಾ ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!