ಹೊಸಕೋಟೆ: ಅನರ್ಹ ಶಾಸಕ ಎಂಟಿಬಿ ನಾಗರಾಜ ಬಿಜೆಪಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ರು. ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಹೊಸಕೋಟೆ ಸಹ ಒಂದು. ಈ ಮೂಲಕ ಶರತ ಬಚ್ಚೇಗೌಡರ ಬಿಜೆಪಿಯ ಟಿಕೆಟ್ ಹಾದಿ ಕ್ಲೋಸ್ ಆಗಿದ್ದು, ಅವರು ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾತ್ನಾಡಿದ ಎಂಟಿಬಿ ನಾಗರಾಜ, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಸೋಮವಾರ ಮತ್ತೆ ನಾಮಪತ್ರ ಸಲ್ಲಿಸುತ್ತೇನೆ. ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ, ಸಂಸದ ಬಚ್ಚೇಗೌಡ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಅಂತಾ ಹೇಳಿದ್ರು.