ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರಂತೆ.
ಜನಸೇವೆಯ ಆಶಯದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕ ಕೆಲಸ ಮಾಡಿದ್ದೇನೆ ಅನ್ನೋ ತೃಪ್ತಿಯಿದೆ. ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿ ವಹಿಸಿಕೊಳ್ಳುವ ಪ್ರಮೇಯವೇ ಬರುವುದಿಲ್ಲವೆಂದು ಹೇಳಿದ್ದಾರಂತೆ.
ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ನಿರಾಸೆಯಾಗಿದೆ. ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರು ಗುರುತಿಸಿಲ್ಲವೆಂದು ಬೇಸರದಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.