ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಭಂಡಾರದೇವಿ ಶಕ್ತಿಪೀಠದ ಮುನೀಂದ್ರದೇವ ಶಿವಾಚಾರ್ಯರು(75) ಭಾನುವಾರ ನಿಧನರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಸ್ವಾಮೀಜಿಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಶ್ರೀಗಳು ಈ ಭಾಗದಲ್ಲಿ ಸಾಕಷ್ಟು ಭಕ್ತರನ್ನು ಹೊಂದಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ನಿಧನರಾಗಿದ್ದು ಭಕ್ತವೃಂದ ಶೋಕಸಾಗರದಲ್ಲಿ ಮುಳುಗಿದೆ.