ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಯಲ್ಲಾಲಿಂಗ ಎಂಬಾತನ ಕೊಲೆ ಪ್ರಕರಣದ ಆರೋಪಿಯ ಮದುವೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದಾರೆ. ಇದನ್ನ ಪ್ರಶ್ನಿಸಿ ಹಿರಿಯ ಪತ್ರಕರ್ತ ಚಾಮರಾಜ ಸವಡಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ಉದಯ ರವಿ ಹಾಗೂ ಕನಕಗಿರಿ ಮಹಿಳಾ ಪೊಲೀಸ್ ಠಾಣೆ ಪಿಎಸ್ಐ ತಾರಾಬಾಯಿ ರಾಠೋಡ ಅನ್ನೋ ಪೊಲೀಸ್ ಅಧಿಕಾರಿಗಳು ಕೊಲೆ ಆರೋಪಿ ಮದುವೆಯಲ್ಲಿ ಭಾಗವಹಿಸಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪತ್ರಕರ್ತ ಚಾಮರಾಜ ಸವಡಿ ಅವರ ಫೇಸ್ ಬುಕ್ ಬರಹ ಇಲ್ಲಿದೆ ನೋಡಿ.