ಕೊಲೆ ಆರೋಪಿ ಆತ್ಮಹತ್ಯೆ!

270

ಪ್ರಜಾಸ್ತ್ರ ಅಪರಾಧ ಸುದ್ದಿ

ಹುಬ್ಬಳ್ಳಿ: ನಗರದಲ್ಲಿ ಬುಧವಾರ ಹಾಡಹಗಲೇ ಯುವಕನ ಕೊಲೆ ನಡೆದಿತ್ತು. ಆ ಕೊಲೆಯ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಿಲ್ವರ್ ಟೌನ್ ನಲ್ಲಿ ಬುಧವಾರ ಮೌಲಾಲಿ ಅನ್ನೋ ಯುವಕನ ಕೊಲೆಯಾಗಿತ್ತು. ಇದರ ಆರೋಪ ಹೊತ್ತಿದ್ದ ಪರಸಪ್ಪ(50) ಅನ್ನೋ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಪರಸಪ್ಪ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಚಮನ್ ಆಗಿ ಕೆಲಸ ಮಾಡುತ್ತಿದ್ದ. ಇತನ ವಿವಾಹಿತ ಮಗಳ ಜೊತೆಗೆ ಕೊಲೆಯಾದ ಮೌಲಾಲಿ ಸಂಬಂಧ ಇಟ್ಟುಕೊಂಡಿದ್ದ ಅನ್ನೋ ಅನುಮಾನದ ಮೇಲೆ ಕೊಲೆ ಮಾಡಿದ್ದಾನೆ ಅನ್ನೋ ಆರೋಪ ಕೇಳಿ ಬಂದಿತ್ತು.

ಕೊಲೆಯಾದ ಮೌಲಾಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ತಾಲೂಕಿನ ಮರಗಡಿ ಗ್ರಾಮದವನಾಗಿದ್ದು, ಹುಬ್ಬಳ್ಳಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದ. ಗೋಕುಲ ರೋಡ್ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ಪರಸಪ್ಪನ ಆತ್ಮಹತ್ಯೆ ಪ್ರಕರಣದ ಕುರಿತು ಸ್ಪಷ್ಟತೆ ಸಿಕ್ಕಿಲ್ಲ.




Leave a Reply

Your email address will not be published. Required fields are marked *

error: Content is protected !!