ಸ್ನೇಹಿತನ ಕೊಲೆ ಹಿಂದಿನ ಕಾರಣವೇನು?

169

ಪ್ರಜಾಸ್ತ್ರ ಅಪರಾಧ ಸುದ್ದಿ

ಚಿಕ್ಕಬಳ್ಳಾಪುರ: ತಾಲೂಕಿನ ಹಾರೋಬಂಡೆ ಗ್ರಾಮದ ಹತ್ತಿರ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಬೆಟ್ಟದ ಬಳಿ ನಂದನ್ ಅನ್ನೋ ಯುವಕನನ್ನು ಕೊಲೆ ಮಾಡಲಾಗಿದೆ. ಯುವಕನಿಗೆ ಕಂಠಪೂರ್ತಿ ಕುಡಿಸಿ ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಲಾಗಿದೆ.

ಈ ಕೊಲೆಗೆ ಕಾರಣವಾಗಿದ್ದು ಪ್ರೀತಿಯ ವಿಚಾರ. ಕೊಲೆಯಾದ ನಂದನ್, ಸ್ನೇಹಿತ ದರ್ಶನ್ ತಂಗಿಯನ್ನು ಪ್ರೀತಿಸುತ್ತಿದ್ದನಂತೆ. ಇದೆ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದ ದರ್ಶನ್, ಮತ್ತೊಬ್ಬ ಸ್ನೇಹಿತ ಆಶ್ರಯ್ ಜೊತೆಗೆ ಕೂಡಿಕೊಂಡು ಕೊಲೆಗೆ ಸ್ಕೆಚ್ ಹಾಕಿದ್ದಾನೆ.

ಮದ್ಯ ಸೇವನೆ ನೆಪದಲ್ಲಿ ಹಾರೋಬಂಡೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವನಿಗೆ ಕಂಠಪೂರ್ತಿ ಕುಡಿಸಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ದರ್ಶನ್ ಹಾಗೂ ಆಶ್ರಯ್ ನನ್ನು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!