ಪ್ರಜಾಸ್ತ್ರ ಅಪರಾಧ ಸುದ್ದಿ
ದಾವಣಗೆರೆ: ಸೋಮವಾರ ತಡರಾತ್ರಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಎಲೆಬೇತೂರ ಗ್ರಾಮದಲ್ಲಿ ನಡೆದಿದೆ. ಗುರುಸಿದ್ದಯ್ಯ(80) ಹಾಗೂ ಪತ್ನಿ ಸರೋಜಮ್ಮ(75) ಕೊಲೆಯಾದ ದುರ್ದೈವಿಗಳು. ಕೊಲೆ ಪ್ರಕರಣ ಬೆಳಗ್ಗೆ ಬೆಳಕಿಗೆ ಬಂದಿದೆ.
ಕೊಲೆ ಮಾಡಿದ ದುಷ್ಕರ್ಮಿಗಳು ಬಾಗಿಲುನ್ನು ಹಾಕಿಕೊಂಡು ಹೋಗಿದ್ದಾರೆ. ಬೆಳಗ್ಗೆ ಪಕ್ಕದ ಮನೆಯವರು ಭೇಟಿಯಾಗಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಈ ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಮದುವೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಇವರಿಬ್ಬರೆ ವಾಸವಾಗಿದ್ದರು.