ಅಣ್ಣನಿಂದ ತಮ್ಮನ ಕೊಲೆ!

233

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಜಾಗದ ವಿಚಾರವಾಗಿ ಸಹೋದರರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕುದರಗೊಂಡ ಗ್ರಾಮದಲ್ಲಿ ನಡೆದಿದೆ. ಸಾಹೇಬಗೌಡ ಚನ್ನಬಸಪ್ಪಗೌಡ ಹದಗಲ್(25) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಮೃತ ಸಾಹೇಬಗೌಡನ ಸಹೋದರ ನಿಂಗನಗೌಡ ಕೊಲೆ ಆರೋಪಿಯಾಗಿದ್ದಾನೆ. ಜಾಗ ಮಾರಾಟದ ವಿಚಾರವಾಗಿ ಸಹೋದರರ ನಡುವೆ ಜಗಳ ನಡೆದಿದೆ. ನಂತರ ನಿಂಗನಗೌಡ ಬಡಿಗೆಯಿಂದ ಸಹೋದರ ಸಾಹೇಬಗೌಡನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಪತ್ನಿ ಕಲಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!