ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

160

ಪ್ರಜಾಸ್ತ್ರ ಅಪರಾಧ ಸುದ್ದಿ

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳದಲ್ಲಿ ನಡೆದಿದೆ. ಸಂಗನಗೌಡ ಮುದಿಗೌಡರ(48) ಕೊಲೆಯಾದ ದುರ್ದೈವಿ.

ಈರಪ್ಪ ಕಿತ್ತಲಿ ಹಾಗೂ ಇತರೆ ನಾಲ್ವರು ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಗನಗೌಡ ಮುದಿಗೌಡರಗೆ ಈರಪ್ಪ ಬೈಕ್ ತಗುಲಿಸಿದ ಕಾರಣಕ್ಕೆ ಜಗಳ ನಡೆದಿದೆ. ಅದು ಕೊಲೆಯಲ್ಲಿ ಅಂತ್ಯವಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!