ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಳಗಾವಿ: ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಇಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಬಸವರಾಜ್ ಬೆಳಗಾಂವ್ಕರ್(23) ಹಾಗೂ ಗಿರೀಶ್ ನಾಗಣ್ಣವರ್(34) ಅನ್ನೋ ಇಬ್ಬರು ಯುವಕರ ಹತ್ಯೆಯಾಗಿದೆ.
ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತಿತ್ತು. ಈ ವೇಳೆ ವಾಹನವೊಂದು ಮೈದಾನಕ್ಕೆ ನುಗ್ಗಿದೆ. ಇದರಿಂದಾಗಿ ಸಹಜವಾಗಿಯೇ ಅಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಹೀಗಿರುವಾಗ ವಾಹನದಿಂದ ಇಳಿದ ದುಷ್ಕರ್ಮಿಗಳು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಮೃತದೇಹಗಳನ್ನು ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಸುತ್ತಮುತ್ತು ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ. ನಗರದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ನಲ್ಲಿ ದಿನಸಿ ಅಂಗಡಿ ವ್ಯಾಪಾರಿಯ ಹತ್ಯೆ ನಡೆದು ಒಂದು ದಿನವೂ ಆಗಿಲ್ಲ. ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ.