ಸಿಲಿಕಾನ್ ಸಿಟಿಯಲ್ಲಿ ಹಾಡುಹಗಲೇ ಹತ್ಯೆ

522

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಪತ್ನಿ ಜೊತೆಗೆ ಬ್ಯಾಂಕ್ ಗೆ ಬಂದಿದ್ದ ರೌಡಿಶೀಟರ್ ನನ್ನ ಹಾಡುಹಗಲೇ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಕೋರಮಂಗಲದಲ್ಲಿ ನಡೆದಿದೆ. ಆಡುಗೋಡೆ ಠಾಣೆ ವ್ಯಾಪ್ತಿಯ ರೌಡಿಶೀಟರ್ ಜೋಸೆಫ್ ಅಲಿಯಾಸ್ ಬಬ್ಲಿ ಎಂಬಾತನನ್ನ ಹತ್ಯೆ ಮಾಡಲಾಗಿದೆ.

ಕೋರಮಂಗಳದ 8ನೇ ಬ್ಲಾಕ್ ನಲ್ಲಿರುವ ಯೂನಿಯನ್ ಬ್ಯಾಂಕ್ ಗೆ ಪತ್ನಿ ಸಮೇತ ಬಂದಿದ್ದ. ಬೈಕ್ ನಲ್ಲಿ ಬಂದ 8 ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!