ಪ್ರಜಾಸ್ತ್ರ ಅಪರಾಧ ಸುದ್ದಿ
ಭದ್ರಾವತಿ: ತಾಲೂಕಿನ ಬಾಬಳ್ಳಿ ಗ್ರಾಮದ ನಿವಾಸಿ ಸೈಯದ್ ರಜಿಕ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಈ ಕೃತ್ಯ ನಡೆದಿದೆ.
ಗ್ರಾಮದ ಹೊರಭಾಗದ ಜಮೀನುವೊಂದರಲ್ಲಿ ಯುವಕನ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.