ಪ್ರಜಾಸ್ತ್ರ ಸುದ್ದಿ
ಹಾಸನ: ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸೈನಿಕ ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬ ಹತ್ಯೆಯಾಗಿದೆ. ಬೇಲೂರು ತಾಲೂಕಿನ ತಿರುಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯಶ್ವಂತ್(25) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಾಗದ ಸರ್ವೇ ವಿಚಾರಕ್ಕೆ ಯೋಧರಾದ ಯತೀಶ್ ಹಾಗೂ ಚಂದನ್ ಅವರ ಮನೆಯವರ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಚಂದನ್, ಯತೀಶ್ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.