ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ವಿಜಯಪುರ ರಸ್ತೆಯ ಹತ್ತಿರ ನಡೆದಿದೆ. ಸೊಲ್ಲಾಪುರ ನಿವಾಸಿ ನಿತಿನ್ ಸಂತೋಷ್ ಮಾಶಾಳಕರ್ ಕೊಲೆಯಾದ ವ್ಯಕ್ತಿ.
ಮೃತ ವ್ಯಕ್ತಿ ಇಂಡಿಯಲ್ಲಿ ಮಾವನ ಮನೆಯಲ್ಲಿ ವಾಸವಾಗಿದ್ದು, ನಿನ್ನೆ ತಡರಾತ್ರಿ ಕುಡಿದ ನಶೆಯಲ್ಲಿ ದುಷ್ಕರ್ಮಿಗಳೊಂದಿಗೆ ಮಾತಿಗೆ ಮಾತು ಬೆಳೆದಿದೆ. ಅದು ಕೊನೆಗೆ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.