ಪ್ರಜಾಸ್ತ್ರ ಅಪರಾಧ ಸುದ್ದಿ
ಕಲಬುರಗಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಸಂಬಂಧಿಕರೆ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮುಂಜಾನೆ ನಡೆದಿದೆ. ವಕೀಲ ಈರಣ್ಣಗೌಡ ಪಾಟೀಲ(40) ಕೊಲೆಯಾದ ದುರ್ದೈವಿ.
ಈರಣ್ಣಗೌಡ ಕೋರ್ಟಿಗೆ ಹೊರಟಿದ್ದ ಈ ವೇಳೆ ಬಂದ ದುಷ್ಕರ್ಮಿಗಳು ಸಾಯಿ ಮಂದಿರ ಹತ್ತಿರದ ಅಪಾರ್ಟ್ ಮೆಂಟ್ ಬಳಿ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.