ಪ್ರಜಾಸ್ತ್ರ ಅಪರಾಧ ಸುದ್ದಿ
ಮೈಸೂರು: ಇಲ್ಲಿನ ಶ್ರೀನಗರದಲ್ಲಿ ಬೆಳ್ಳಂಬೆಳಗ್ಗೆ ಡಬಲ್ ಮರ್ಡರ್ ನಡೆದಿದೆ. ಶಿವಪ್ರಕಾಶ್ ಎಂಬುವರ ಪುತ್ರ ಸಾಗರ್ ಎಂಬಾತ ತಂದೆ ಹಾಗೂ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದಾನೆ. ಈ ವೇಳೆ ತಡೆಯಲು ಬಂದ ಮಹಿಳೆಯ ಮಗ ನಾಗಾರ್ಜುನ್ ಮೇಲೆಯೂ ಹಲ್ಲೆ ಮಾಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾನೆ ಈ ಘಟನೆ ನಡೆದಿದ್ದು, ಸಾಂಸ್ಕೃತಿಕ ನಗರಿ ಬೆಚ್ಚಿಬಿದ್ದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ. ಸಾಗರ್ ತಂದೆಯ ಜೊತೆಗಿದ್ದ ಮಹಿಳೆ ಯಾರು ಏನು ಅನ್ನೋದರ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.