ಪ್ರಜಾಸ್ತ್ರ ಅಪರಾಧ ಸುದ್ದಿ
ಶಿವಮೊಗ್ಗ: ಕಳೆದ ರಾತ್ರಿ ಹಿಂದೂ ಕಾರ್ಯಕರ್ತ ಹರ್ಷಾ ಎಂಬಾತನನ್ನು ಕೊಲೆ ಮಾಡಲಾಗಿದ್ದು, ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಇದರಿಂದಾಗಿ ಶಿವಮೊಗ್ಗದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿಗೆ ಹೋಗುವ ರಸ್ತೆಯ ಬಡಾವಣೆಯಲ್ಲಿ ಕಳೆದ ರಾತ್ರಿ ಐದಾರು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಇದರಿಂದಾಗಿ ಕಲ್ಲು ತೂರಾಟ ನಡೆಸಲಾಗಿದೆ. ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಲಾಗಿದೆ. ಈ ಎಲ್ಲ ಕಾರಣಗಳಿಗೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.