ಪ್ರಜಾಸ್ತ್ರ ಅಪರಾಧ ಸುದ್ದಿ
ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಹತ್ತಿರದ ಕೃಷ್ಣಾಪುರದ 4ನೇ ಬ್ಲಾಕ್ ನಲ್ಲಿ ದಿನಸಿ ಅಂಗಡಿ ಮಾಲೀಕ ಜಲೀಲ್(42) ಎಂಬುವವರ ಮೇಲೆ ಶನಿವಾರ ರಾತ್ರಿ ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಹೀಗಾಗಿ ಭಾನುವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ವ್ಯಾಪಾರ ಮಾಡುತ್ತಿದ್ದ ಸಂದರ್ಭದಲ್ಲಿ ಬಂದ ಇಬ್ಬರು ಎದೆಗೆ ಚೂರಿ ಇರಿದು ಪರಾರಿಯಾಗಿದ್ದಾರೆ. ಅಕ್ಕಪಕ್ಕದ ಅಂಗಡಿಯವರು ಆಸ್ಪತ್ರೆಗೆ ದಾಖಲಿಸಿದರು, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದರು.
ಇದು ಕೋಮು ದ್ವೇಷಕ್ಕಾಗಿ ನಡೆದ ಕೊಲೆಯೋ ಅಥವ ಬೇರೆ ಕಾರಣಕ್ಕೆ ನಡೆದ ಕೊಲೆಯೋ ಅನ್ನೋದು ಈಗಲೇ ಏನೂ ಹೇಳಲು ಆಗಲ್ಲ. ವದಂತಿಗಳಿಗೆ ಜನರು ಕಿವಿ ಕೊಡಬಾರದು. ತನಿಖೆಯ ಬಳಿಕ ಹತ್ಯೆಯ ಕುರಿತು ತಿಳಿದು ಬರಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೆ ತರಲಾಗಿದೆ. ಇದು ಕ್ರಿಸ್ಮಸ್ ಹಬ್ಬಕ್ಕೆ ಅನ್ವಯವಾಗದು ಎಂದಿದ್ದಾರೆ.