ಪ್ರಜಾಸ್ತ್ರ ಅಪರಾಧ ಸುದ್ದಿ
ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಬಳಿಯ ಸೇತುವೆ ಕೆಳಗೆ ಪತ್ತೆಯಾದ ಶವದ ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸಲಾಗಿದೆ. ಮೇ 22ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಕೆಆರ್ ಎಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಮೃತ ವ್ಯಕ್ತಿ ಅಶೋಕ ಎಂಬಾತ ಆರೋಪಿ ಚಂದ್ರನ ಪತ್ನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ಕಾರಣಕ್ಕೆ ಕಲ್ಲಿನಿಂದ ಹೊಡೆದು ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿಸಾಕಿ ಅಪಘಾತವೆಂದು ಬಿಂಬಿಸಲಾಗಿತ್ತು.
ಕೊಲೆ ಶಂಕೆಯ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಂದ್ರ ಹಾಗೂ ಶ್ರೀಧರ ಅನ್ನೋ ಇಬ್ಬರು ಆರೋಪಿಗಳನ್ನ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.