ಪ್ರಜಾಸ್ತ್ರ ಅಪರಾಧ ಸುದ್ದಿ
ಸಿಂದಗಿ: ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನ ಕೊಚ್ಚಿ ಕೊಲೆ ಮಾಡಲಾಗಿದೆ. ಮಲ್ಲು ನಾಯ್ಕೋಡಿ(30) ಕೊಲೆಯಾದ ದುರ್ದೈವಿ. ಗ್ರಾಮದ ಬಸವಣ್ಣ ದೇವರ ಗುಡಿ ಹಿಂದುಗಡೆ ಭಾನುವಾರ ಸಂಜೆ ಸುಮಾರು 4 ಗಂಟೆಗೆ ಈ ಘಟನೆ ನಡೆದಿದೆ.
ಕೊಲೆಗೆ ಹಳೆ ವೈಷಮ್ಯ ಕಾರಣ ಇರಬಹುದು ಎಂದು ಹೇಳಲಾಗ್ತಿದೆ. ಕೊಲೆಯಾದ ವ್ಯಕ್ತಿ ಗುಬ್ಬೇವಾಡ ಗ್ರಾಮ ಪಂಚಾಯಿತಿಯ ಅಧ್ಯಕ್ಷನ ತಮ್ಮನಾಗಿದ್ದಾನೆ. ಮೃತನಿಗೆ ಇಬ್ಬರು ಮಕ್ಕಳಿದ್ದಾರೆ. ಈ ಬಗ್ಗೆ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರೆಪ್ಪ ಶರಣಪ್ಪ ಅಡವಿ, ದಾದಪ್ಪ ಶರಣಪ್ಪ ಅಡವಿ, ರಾಜಕುಮಾರ ಶರಣಪ್ಪ ಅಡವಿ, ಬಸವರಾಜ ಶರಣಪ್ಪ ಅಡವಿ ಅನ್ನೋ ಒಂದೇ ಕುಟುಂಬದ ನಾಲ್ವರು ಸಹೋದರರ ಮೇಲೆ ಕೊಲೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.