ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಲನಹಳ್ಳಿ ಹತ್ತಿರದ ಮಾರ್ಗೊಂಡನಹಳ್ಳಿಯಲ್ಲಿ ಈ ಕೃತ್ಯ ನಡೆದಿದೆ. ಕುಳ್ಳ ವೆಂಕಟೇಶ್ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಬೈಕ್ ನಲ್ಲಿ ಹೊರಟಿದ್ದ ಕುಳ್ಳ ವೆಂಕಟೇಶಗೆ ಆಟೋದಿಂದ ಡಿಕ್ಕಿ ಹೊಡೆದಿದ್ದಾರೆ. ಆತ ಕೆಳಗೆ ಬೀಳುತ್ತಿದ್ದಂತೆ ಅದರಿಂದ ಕೆಳಗೆ ಇಳಿದು ಐವರು ದುಷ್ಕರ್ಮಿಗಳು ಮಚ್ಚು ಲಾಂಗಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಜಮೀನು ವಿಚಾರಕ್ಕೆ ಈ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಆಲನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.