ಸಿಂದಗಿಯ ಬೂದಿಹಾಳ ಗ್ರಾಮದಲ್ಲಿ ಯುವಕನ ಮರ್ಡರ್

1064

ಪ್ರಜಾಸ್ತ್ರ ಅಪರಾಧ ಸುದ್ದಿ

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ನಿನ್ನೆಯಷ್ಟೇ ಪಟ್ಟಣದ ಐಸಿಐಸಿಐ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೊಂದು ಹತ್ಯೆ ಘಟನೆ ನಡೆದಿದೆ.

ಸಿಂದಗಿ ತಾಲೂಕಿನ ಬೂದಿಹಾಳ ಪಿ.ಎಚ್ ಗ್ರಾಮದಲ್ಲಿ ಅಂದಾಜು 25 ವರ್ಷದ ಅನಿಲ ಶರಣಪ್ಪ ಇಂಗಳಗಿ ಅನ್ನೋ ಯುವಕನ ಹತ್ಯೆ ಮಾಡಲಾಗಿದೆ. ಗ್ರಾಮದ ಅಗಸಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಮುಂಜಾನೆ ಸುಮಾರು 10 ಗಂಟೆಯ ಟೈಂನಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ. ಸ್ಥಳಕ್ಕೆ ಸಿಪಿಐ ಹೆಚ್.ಎಂ ಪಟೇಲ, ಪಿಎಸ್ಐ ಸಂಗಮೇಶ ಹೊಸಮನಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!