ಪ್ರಜಾಸ್ತ್ರ ಅಪರಾಧ ಸುದ್ದಿ
ಚಿತ್ರದುರ್ಗ: ಕೋಟೆನಾಡಿನಲ್ಲಿ ಬೆಳ್ಳಂಬೆಳಗ್ಗೆ ಮೂವರನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಹತ್ತಿರದಲ್ಲಿ ಮೂವರ ತೆಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
50 ವರ್ಷದ ಮಾರೇಶ, 30 ವರ್ಷದ ಸೀನಪ್ಪ ಹಾಗೂ 30 ವರ್ಷದ ಯಲ್ಲೇಶ ಕೊಲೆಯಾದ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇವರು ಹಂದಿ ಸಾಕಾಣಿಕೆ ಮಾಡಿಕೊಂಡಿದ್ದು, ಹಂದಿ ಕದಿಯಲು ಬಂದವರು ಈ ಕೃತ್ಯ ಎಸಗಿರಬಹುದು ಅನ್ನೋ ಶಂಕೆ ವ್ಯಕ್ತವಾಗಿದೆ.
ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಮಾಡಿರಬಹುದು ಎನ್ನಲಾಗ್ತಿದೆ. ಸ್ಥಳಕ್ಕೆ ನಾಯಕನಹಟ್ಟಿ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.