ಪ್ರಜಾಸ್ತ್ರ ಅಪರಾಧ ಸುದ್ದಿ
ಯಾದಗಿರಿ: ಇಂದು ಎಲ್ಲೆಡೆ ಬಕ್ರೀದ್ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡಲಾಗ್ತಿದೆ. ಅದೆ ರೀತಿ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಚಾಂದಸಾಬ್ ಚೌದ್ರಿ ಎಂಬಾತ ಪ್ರಾರ್ಥನೆಗೆ ಹೊರಟ್ಟಿದ್ದಾಗ ಆತನ ಮೇಲೆ ದಾಳಿ ಮಾಡಿ ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಹತ್ಯೆ ಮಾಡಿದ್ದಾರೆ. ಬುಧವಾರ ಮುಂಜಾನೆ ಗೋಗಿ(ಕೆ) ಗ್ರಾಮದಲ್ಲಿ ಈ ಒಂದು ಕೃತ್ಯ ನಡೆದಿದೆ. ಸಂಭ್ರಮದ ಮನೆಯಲ್ಲಿ ಕಣ್ಣೀರು ತುಂಬಿಕೊಂಡಿದೆ. ಸ್ಥಳಕ್ಕೆ ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ, ಸಿಪಿಐ ಶ್ರೀನಿವಾಸ ಅಲ್ಲಾಪುರ ಹಾಗೂ ಪಿಎಸ್ಐ ಸೋಮು ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.