ಪ್ರಜಾಸ್ತ್ರ ಅಪರಾಧ ಸುದ್ದಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹರಿಯಿತು ನೆತ್ತರು.ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ
ನಡೆದಿದೆ..
ಹೌದು.. ಗದಗನ ಕಾನೂನು ಕಾಲೇಜಿನ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು,ಕೌಟುಂಬಿಕ ಕಲಹ ಹಿನ್ನೆಲೆ, ಅಳಿಯನಿಂದಲೇ ಮಾವನ ಕೊಲೆಯಾಗಿದೆ ಎಂಬುವಂತ ಶಂಕೆ ವ್ಯಕ್ತವಾಗುತ್ತಿದ್ದು,ಪೊಲೀಸ್ ತನಿಖೆಯ ಮೂಲಕವೇ ಸತ್ಯ ಬೆಳಕಿಗೆ ಬರಲಿದೆ.
ಇತ್ತಿಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದ ಶಂಕ್ರಪ್ಪ ಅವರನ್ನು ಬೆಳ್ಳಂಬೆಳಿಗ್ಗೆ ಕೊಲೆ ಮಾಡಿದ್ದು, ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಶವ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ವಿದ್ಯಾನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.