ವಿದ್ಯಾಕಾಶಿಯಲ್ಲಿ ಮತ್ತೊಂದು ಮರ್ಡರ್

186

ಪ್ರಜಾಸ್ತ್ರ ಅಪರಾಧ ಸುದ್ದಿ

ಧಾರವಾಡ: ಕಳೆದ ಎರಡು ದಿನಗಳ ಹಿಂದೆ ನಡೆದ ಯುವಕನೊಬ್ಬನ ಹತ್ಯೆಯ ಬೆನ್ನಲ್ಲೇ ಮತ್ತೊಂದು ಕೊಲೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ನ ಬಾಣಸಿಗನನ್ನು ಕೊಲೆ ಮಾಡಲಾಗಿದೆ.

ನಗರದ ವಿಮಲ್ ಹೋಟೆಲ್ ನಲ್ಲಿ ಬಾಣಸಿಗನಾಗಿದ್ದ ಫಕೀರೇಶ್ ಪ್ಯಾಟಿ ಕೊಲೆಯಾದ ವ್ಯಕ್ತಿ. ಈತ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಸುಗನಹಳ್ಳಿ ಗ್ರಾಮದವನಾಗಿದ್ದಾನೆ. ಕೊಲೆ ಆರೋಪಿ ತಮಿಳುನಾಡಿನ ಕನೈಯಪ್ಪ ಕನಯ್ಯ ಎಂದು ತಿಳಿದು ಬಂದಿದೆ.

ಧಾರವಾಡ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!