ಪ್ರಜಾಸ್ತ್ರ ಅಪರಾಧ ಸುದ್ದಿ
ಕಲಬುರಗಿ: ನಗರದಲ್ಲಿ ಚಿಲ್ಟು ರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಇಂದು ಹಾಡಹಗಲೇ ಯುವಕನೊಬ್ಬನ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ರಕ್ತದ ಮುಡುವಿನಲ್ಲಿ ಬಿದ್ದಿದ್ದ 21 ವರ್ಷದ ವೀರೇಶ ಕಡಂಗಚಿ ಅನ್ನೋ ಯುವಕ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ನಗರದ ಸಾರ್ವಜನಿಕ ಉದ್ಯಾನವನದ ಮುಂಭಾಗದಲ್ಲಿಯೇ ಈ ಘಟನೆ ನಡೆದಿದೆ. ಪಲ್ಸರ್ ಬೈಕ್ ಮೇಲೆ ಬಂದ ಮೂವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಯಾವ ಕಾರಣಕ್ಕೆ ಈ ದಾಳಿ ನಡೆದಿದೆ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ರಾಣೇಶ ಪೀರ್ ದುರ್ಗಾ ನಿವಾಸಿಯಾಗಿದ್ದ ವೀರೇಶ, ಶರಣಬಸವೇಶ್ವರ ಪದವಿ ಕಾಲೇಜಿನಲ್ಲಿ ಓದುತ್ತಿದ್ದ. ಮಗನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.