ಮುಲ್ಕಿ: ಶನಿವಾರ ಮಹಿಳೆಯೊಬ್ಬರನ್ನ ಕೊಲೆ ಮಾಡಿದ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಶಿಮಂತೂರು ಗ್ರಾಮದ ಪರಂಕಿಲ ತೋಟಮನೆ ನಿವಾಸಿ 70 ವರ್ಷದ ಶಾರದ ಶೆಟ್ಟಿ ಕೊಲೆಯಾದ ದುರ್ದೈವಿಯಾಗಿದ್ದಾರೆ.
ಕಳ್ಳತನ ಮಾಡುವ ಉದ್ದೇಶದಿಂದ ಕೊಲೆ ಮಾಡಲಾಗಿದೆ ಅಂತಾ ಹೇಳಲಾಗ್ತಿದೆ. ಕೊಲೆ ಬಳಿಕ ಮೃತದೇಹವನ್ನ ಬಾವಿಗೆ ಎಸೆಯಲು ವಿಫಲ ಯತ್ನ ನಡೆಸಿರುವುದು ಕಂಡು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ರು ತನಿಖೆ ನಡೆಸಿದ್ದಾರೆ.