ಪ್ರಜಾಸ್ತ್ರ ಅಪರಾಧ ಸುದ್ದಿ
ಕಲಬುರಗಿ: ಜಿಲ್ಲೆಯ ಶಹಬಾದ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಗಿರೀಶ್ ಕಂಬನೂರ್ ಹತ್ಯೆಯಾದ ಕಾಂಗ್ರೆಸ್ ಮುಖಂಡರಾಗಿದ್ದಾರೆ.
ರೈಲು ಟಿಕೆಟ್ ಬುಕ್ ಮಾಡಲು ಸ್ಟೇಷನ್ ಗೆ ಬಂದಾಗ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಶಹಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.