ಗ್ರಾ.ಪಂ ಉಪಾಧ್ಯಕ್ಷನ ಕೊಲೆ

733

ಸಿಂದಗಿ: ತಾಲೂಕಿನ ಯರಗಲ್ಲ ಬಿ.ಕೆ.ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷನನ್ನ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 48 ವರ್ಷದ ಶರಣಪ್ಪ ಗುರಪ್ಪ ಪುಟಾಣಿ ಎಂಬಾತ ಕೊಲೆಯಾದ ವ್ಯಕ್ತಿಯೆಂದು ತಿಳಿದು ಬಂದಿದೆ.

ಮನೆ ಮುಂದಿನ ತಗಡಿನ ಶೆಡ್ ನಲ್ಲಿ ಹೊರಸಿನ ಮೇಲೆ ಮಲಗಿದ್ದ ಶರಣಪ್ಪನ ಮೇಲೆ ಯಾರೋ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಕೊಡಲಿಯಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾರೆ. ಮನೆ ಪಕ್ಕದ ಖಾಲಿ ಜಾಗದಲ್ಲಿ ಕೊಲೆಗೆ ಬಳಸಿದ ಕೊಡಲಿಯನ್ನು ಎಸೆದು ಪರಾರಿಯಾಗಿದ್ದಾರೆ.

ಘಟನೆ ತಡರಾತ್ರಿ ನಡೆದಿದೆ ಎಂದು ಹೇಳಲಾಗ್ತಿದ್ದು, ಬೆಳಗಿನ ಜಾವ ಇದು ಬೆಳಕಿಗೆ ಬಂದಿದೆ. ಘಟನೆ ತಿಳಿದು ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ.




Leave a Reply

Your email address will not be published. Required fields are marked *

error: Content is protected !!