ಪ್ರಜಾಸ್ತ್ರ ಸುದ್ದಿ
ಉಡುಪಿ: ಮುರುಘಾ ಶ್ರೀಗಳು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇದನ್ನು ಎಲ್ಲರೂ ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರ ವಿರುದ್ಧ ಆರೋಪ ದೃಢವಾಗಿದೆ ಎಂದು ಚಿತ್ರದುರ್ಗದ ಎಸ್ಪಿ ಪರಶುರಾಮ್ ಸೃಷ್ಟಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
600ಕ್ಕೂ ಹೆಚ್ಚು ಪುಟಗಳ ವರದಿ ರೆಡಿಯಾಗಿದೆ. ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಸಲಾಗಿದೆಯಂತೆ. ಮಕ್ಕಳಿಗೆ ಸೇಬು ಹಣ್ಣಿನಲ್ಲಿ ಮತ್ತು ಬರುವ ಔಷಧಿ ಸೇರಿಸಿ ನೀಡುತ್ತಿದ್ದರಂತೆ. ಇದರಲ್ಲಿ ವಾರ್ಡ್ ನಳ ಪಾತ್ರವಿದೆ. ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವುದಾಗಲಿ, ಅವರಿಗೆ ಲೈಂಗಿಕ ಕಿರುಕುಳ ನೀಡುವುದಾಗಲಿ ಮಾಡುತ್ತಿದ್ದರಂತೆ. ಒಂದು ಬಾಲಕಿಯ ಕೊಲೆ ಸಹ ನಡೆದಿದೆ ಎಂದು ಸಹ ವರದಿಯಲ್ಲಿದೆ ಎಂದು ಹೇಳಲಾಗಿದೆ.