ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇದುವರೆಗೂ ಅವರು ಪೀಠ ತ್ಯಾಗ ಮಾಡಿಲ್ಲ. ಹೀಗಾಗಿ ವೀರಶೈವ ಲಿಂಗಾಯತ ಮುಖಂಡರು ಇಂದು ಸಭೆ ನಡೆಸಲಿದ್ದಾರೆ.
ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಮಾಜಿ ಸಚಿವ ಎಚ್.ಏಕಂತಾಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮಠದ ನಿರ್ವಹಣೆ, ಮುಂದಿನ ನಡೆ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇನ್ನು ಶ್ರೀಗಳ ಪೀಠ ತ್ಯಾಗದ ಕುರಿತು ಹೋರಾಟದ ಬಗ್ಗೆಯೂ ಚರ್ಚೆಯಾಗಲಿದೆ.