ಮುರುಘಾ ಸ್ವಾಮೀಜಿ ಮತ್ತೆ ಬಂಧನ

170

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: 2ನೇ ಪೋಕ್ಸೋ ಪ್ರಕರಣ ಸಂಬಂಧ ಮುರುಘಾಮಠದ ಸ್ವಾಮೀಜಿ ವಿರುದ್ಧ ಚಿತ್ರದುರ್ಗದ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಂಧನ ವಾರೆಂಟ್ ಆದೇಶಿಸಿತ್ತು. ಈ ಸಂಬಂಧ ಸ್ವಾಮೀಜಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಶನಿವಾರ ಹೊರ ಬಂದಿದ್ದರು. ಇದೀಗ ಮತ್ತೆ ಜೈಲಿಗೆ ಹೋಗಿದ್ದಾರೆ. ದಾವಣಗೆರೆ ನಗರದ ದೊಡ್ಡಪೇಟೆಯಲ್ಲಿರುವ ವಿರಕ್ತಮಠದಲ್ಲಿ ವಾಸವಾಗಿದ್ದರು.

ಡಿವೈಎಸ್ಪಿ ಅನಿಲ್ ಕುಮಾರ್, ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ್ ನೇತೃತ್ವದ ಪೊಲೀಸ್ ತಂಡ ಮಠಕ್ಕೆ ಆಗಮಿಸಿ ಸ್ವಾಮೀಜಿಯನ್ನು ವಶಕ್ಕೆ ಪಡೆದಿದೆ. ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!