ಮುರುಘಾ ಸ್ವಾಮೀಜಿ ಜಾಮೀನು ರದ್ದು

75

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮಂಜೂರಾಗಿದ್ದ ಜಾಮೀನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಮಂಗಳವಾರ ಈ ಕುರಿತು ಮಂಗಳವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇದರ ಜೊತೆಗೆ ನಾಲ್ಕು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ಚಿತ್ರದುರ್ಗ ಕೋರ್ಟಿಗೆ ಸೂಚಿಸಲಾಗಿದೆ.

ಡಿ.ರಾಜಪ್ಪ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಾಡಿದ ವಿಕ್ರಮ್ ನಾಥ್ ಅವರಿದ್ದ ದ್ವಿಸದಸ್ಯಪೀಠ, ವಿಚಾರಣೆ ಮುಗಿಯುವ ತನಕ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿರಬೇಕು. ಎಲ್ಲರ ವಿಚಾರಣೆಗೂ ಸಹಕರಿಸಬೇಕು. ವಿಚಾರಣೆಗೆ ಹೆಚ್ಚಿನ ಕಾಲಾವಕಾಶ ಬೇಕಿದ್ದರೆ ತಮ್ಮ ಗಮನಕ್ಕೆ ತರಬೇಕು. ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗುವಂತೆ ಸೂಚಿಸಿದೆ.




Leave a Reply

Your email address will not be published. Required fields are marked *

error: Content is protected !!