ಕಾಂಗ್ರೆಸ್ ಮುಸ್ಲಿಂ ನಿಯೋಗ ಸಿಎಂ ಭೇಟಿ

509

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಜಾಬ್ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಸ್ಲಿಂ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಸಿಎಂ ಭೇಟಿಯಾಗಿ ಚರ್ಚಿಸಿದ್ದಾರೆ.

ಸರ್ಕಾರ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ನಿರ್ವಹಿಸುವಲ್ಲಿ ವಿಫಲವಾಗಿದೆ. ಇದರಲ್ಲಿ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಸಂವಿಧಾನದ ಆಧಾರದಲ್ಲಿ ಕೋರ್ಟ್ ಏನೇ ತೀರ್ಪು ನೀಡಿದರೂ ನಾವು ಅದಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಈ ವೇಳೆ ತನ್ವೀರ್ ಸೇಠ್, ಜಮೀರ್ ಅಹ್ಮದ್, ಯು.ಟಿ ಖಾದರ್, ಅರ್ಸದ್ ರಿಜ್ವಾನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!