ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕರ್ನಾಟಕ ಸರ್ಕಾರ ಮುಸ್ಲಿಂರ 2ಬಿ ಮೀಸಲಾತಿ ರದ್ದುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ನ್ಯಾಯಮೂರ್ತಿ ಕೆ.ಎಂ ಜೋಸೆಫ್ ನೇತೃತ್ವದ ನ್ಯಾಯಪೀಠ ಆದೇಶಕ್ಕೆ ತಡೆ ನೀಡಿದೆ. ಸರ್ಕಾರದ ಆದೇಶದ ಮೇಲೆ ಮೇ 9ರ ತನಕ ಯಾವುದೇ ಪ್ರವೇಶ, ನೇಮಕಾತಿ ನಡೆಸುವುದಿಲ್ಲವೆಂದು ತಿಳಿಸಿದೆ.
ಮುಸ್ಲಿಂರ 2ಬಿ ಮೀಸಲಾತಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ ಈ ಸಮುದಾಯದ ಶೇಕಡ 4ರಷ್ಟು ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯತರಿಗೆ ಹಂಚಿಕೆ ಮಾಡಲಾಗಿತ್ತು. ಮುಸ್ಲಿಂರನ್ನು ಆರ್ಥಿಕವಾಗಿ ಹಿಂದುಳಿದ ಇಡಬ್ಲುಎಸ್ ಗೆ ಸೇರಿಸಿತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.