ಪ್ರಜಾಸ್ತ್ರ ಸುದ್ದಿ
ಉತ್ತರ ಕನ್ನಡ: ಹಿಂದುತ್ವಕ್ಕಾಗಿ ನಾನು ಕಾರ್ಕಳದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದಕ್ಕೆ ಇಂದು ಸಿದ್ದಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಕಾರ್ಕಳ ಶಾಸಕ, ಇಂದಿನ ಸಚಿವ ಸುನಿಲ್ ಕುಮಾರ್, ಮುತಾಲಿಕ್ ಸ್ಪರ್ಧೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು. ಎಲ್ಲರೂ ಸ್ವತಂತ್ರರು. ನಮ್ಮ ಪಕ್ಷದ ನಿಲುವು ಹೇಗಿರಬೇಕೆಂದು ಬೇರೆಯವರು ಹೇಳಬೇಕಾಗಿಲ್ಲ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಸ್ಪರ್ಧೆಗಳು ಇರಬೇಕು. ಅಂತಿಮವಾಗಿ ಮತದಾರ ತೀರ್ಮಾನ ಮಾಡುತ್ತಾನೆ ಎಂದರು.