ಹೈಕಮಾಂಡ್ ಜೊತೆ ಚರ್ಚೆ ಬಳಿಕ ನನ್ನ ತೀರ್ಮಾನ: ವಿ.ಸೋಮಣ್ಣ

406

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿಯಲ್ಲಿ ಮುನಿಸಿಕೊಂಡಿರುವ ನಾಯಕರುಗಳಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಸಹ ಒಬ್ಬರು. ಎರಡು ಕಡೆ ಸ್ಪರ್ಧೆ ಮಾಡಿ ಸೋಲು ಅನುಭವಿಸಿರುವ ವಿ.ಸೋಮಣ್ಣ ಆಗಾಗ ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಹೈಕಮಾಂಡ್ ಜೊತೆಗೆ ಮಾತನಾಡಲು ಈಗ ಕಾಲ ಪಕ್ವವಾಗಿದೆ. ಡಿಸೆಂಬರ್ 22ರೊಳಗೆ ನಾಲ್ಕೈದು ಜನ ಸೇರಿ ಕೇಂದ್ರದ ನಾಯಕರನ್ನು ಭೇಟಿಯಾಗುತ್ತೇವೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿನ ಸೋಲು, ಅದಕ್ಕೆ ಯಾರು ಕಾರಣ ಸೇರಿದಂತೆ ಎಲ್ಲ ವಿಚಾರ ಚರ್ಚೆ ಮಾಡುತ್ತೇವೆ. ವರಿಷ್ಠರು ಏನು ಹೇಳುತ್ತಾರೋ ಅದರಂತೆ ನಡೆದುಕೊಳ್ಳುತ್ತೇನೆ. ಡಿಸೆಂಬರ್ 6ರ ನಂತರ ಹೇಳುತ್ತೇನೆ ಎಂದಿದ್ದು ನಿಜ. ನನಗೆ ಆಗಿರುವ ಹಿನ್ನಡೆ ಬಗ್ಗೆ ಪಕ್ಷಕ್ಕೂ ಮನವರಿಕೆಯಾಗಿದೆ. ಆದಷ್ಟು ಬೇಗ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!