ನನ್ನ ತಾಯಿ ಮೇಲೂ ಆಸಿಡ್ ದಾಳಿಯಾಗಿದೆ: ಕುಮಾರಸ್ವಾಮಿ

177

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಯುವತಿಯೊಬ್ಬಳ ಮೇಲೆ ಪಾಗಲ್ ಪ್ರೇಮ್ ಆಸಿಡ್ ದಾಳಿ ನಡೆಸಿದ್ದಾನೆ. ಯುವತಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮನುಷ್ಯತ್ವ, ಮಾನವೀಯತೆ ಇಲ್ಲದವರು ಈ ರೀತಿ ಮಾಡುತ್ತಾರೆ. ಇಂತಹ ಸ್ಥಿತಿ ಯಾರಿಗೂ ಬರಬಾರದು ಎಂದಿದ್ದಾರೆ.

ಆಸಿಡ್ ದಾಳಿ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ತಾಯಿ ಮೇಲೂ ಆಸಿಡ್ ದಾಳಿಯಾಗಿದೆ. ಅವರು ನಿತ್ಯ ಕೊರಗುತ್ತಾರೆ. ಅದನ್ನು ನಾವು ನೋಡುತ್ತಿದ್ದೇವೆ. ಅವರು ದೈವ ಭಕ್ತೆಯಾಗಿದ್ದ, ಧೈರ್ಯ ಮಾಡಿ ಬದುಕುತ್ತಿದ್ದಾರೆ. ಅವರು ಬದುಕಿದ್ದೆ ಚಮತ್ಕಾರ ಎಂದು ಎಚ್.ಡಿ ಕುಮಾರಸ್ವಾಮಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!