ದಸರಾ ಯುವ ಸಂಭ್ರಮ ಉದ್ಘಾಟಿಸಲಿರುವ ಗೋಲ್ಡನ್ ಗಣಿ

437

ಮೈಸೂರು: ಸೆಪ್ಟೆಂಬರ್ 17 ರಿಂದ 25ರ ವರೆಗೆ ದಸರಾ ಆಚರಣೆ ನಡೆಯಲಿದೆ 9 ದಿನಗಳ ಹಬ್ಬಕ್ಕೆ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ, ಜಾನಪದ ಸೇರಿದಂತೆ ವಿವಿಧ ಕಲೆಗಳ ಪ್ರದರ್ಶನ ನಡೆಯಲಿದೆ. ಅದೇ ರೀತಿ ಯುವ ಸಂಭ್ರಮ ಸಹ ನಡೆಯಲಿದೆ. ಇದನ್ನ ನಟ ಗೋಲ್ಡನ್ ಸ್ಟಾರ್ ಗಣೇಶ ಉದ್ಘಾಟನೆ ಮಾಡಲಿದ್ದಾರೆ.

ಮೈಸೂರಿನ ಬಯಲು ರಂಗ ಮಂದಿರದಲ್ಲಿ ಪ್ರತಿ ದಿನ ಸಂಜೆ 5.30ಕ್ಕೆ ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ರಾಜ್ಯದ 278 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸ್ತಿದ್ದು, ಉತ್ತರ ಕರ್ನಾಟಕ ಭಾಗದ ಕಾಲೇಜುಗಳಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಇಂದು ಯುವ ಸಂಭ್ರಮ ಪೋಸ್ಟರ್ ಬಿಡುಗಡೆ ಮಾಡಿದ್ರು.

ಯುವ ಸಂಭ್ರಮ ಪೋಸ್ಟರ್ ಬಿಡುಗಡೆ

ಯುವ ಸಂಭ್ರಮವನ್ನ ನಟ ಗಣೇಶ ಉದ್ಘಾಟಿಸಲಿದ್ದು, ಇಲ್ಲಿ ಕಿರುನಾಟಕ, ಏಕಪಾತ್ರಾಭಿನಯ ಸೇರಿದಂತೆ ಕಲೆಗೆ ಸಂಬಂಧಿಸಿದಂತೆ ಹಲವು ಪ್ರಕಾರಗಳ ಪ್ರದರ್ಶನ ನಡೆಯಲಿದೆ. ಇಂದು ಬಿಡುಗಡೆಗೊಂಡ ಪೋಸ್ಟರ್ ಕಾರ್ಯಕ್ರಮದಲ್ಲಿ ಮೈಸೂರು ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ರಾಮದಾಸ, ಸಂಸದ ಪ್ರತಾಪ ಸಿಂಹ, ಶಾಸಕ ಎಲ್ ನಾಗೇಂದ್ರ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿದ್ರು.




Leave a Reply

Your email address will not be published. Required fields are marked *

error: Content is protected !!