ದಸರಾ ಸಂಭ್ರಮಕ್ಕೆ ಡಾ.ಎಸ್.ಎಲ್ ಭೈರಪ್ಪ ಚಾಲನೆ

1075

ಮೈಸೂರು: ಇಂದಿನಿಂದ 9 ದಿನಗಳ ಕಾಲ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರೆಯ ಸಂಭ್ರಮ. ಬೆಳಗ್ಗೆ 9.39ರಿಂದ 10-25ರ ನಡುವೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡಿದೇವಿಗೆ ಪೂಜೆ ಸಲ್ಲಿಸುವ ಮೂಲಕ, ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್ ಭೈರಪ್ಪನವರು ಚಾಲನೆ ನೀಡಿಲಿದ್ದಾರೆ.

ಡಾ.ಎಸ್.ಎಲ್ ಭೈರಪ್ಪ

ಈ ವೇಳೆ ಸಿಎಂ ಬಿ.ಎಸ್ ಯಡಿಯೂರಪ್ಪ, ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ ಸಿಂಹ, ಶಾಸಕ ರಾಮದಾಸ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ರಾಜವಂಶದ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯ ಆವರಣದಲ್ಲಿರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ, ಬೆಳಗ್ಗೆ 9.45ರಿಂದ ಖಾಸಗಿ ದರ್ಬಾರ್ ನಡೆಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!