ಮೈಸೂರು ದಸರಾ: ಅರಮನೆಯತ್ತ ಗಜಪಡೆ ತಯಾರಿ

204

ಪ್ರಜಾಸ್ತ್ರ ಸುದ್ದಿ

ಮೈಸೂರು: ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಹೊರಲಿರುವ ಗಜರಾಜ ಸೇರಿದಂತೆ ಆನೆಗಳ ಪಡೆ ಅರಮನೆಗೆ ಇಂದು ಆಗಮಿಸಲಿವೆ. ವೀರನಹೊಸಹಳ್ಳಿಯಲ್ಲಿ ಬೆಳಗ್ಗೆ 10 ಗಂಟೆಯ ಸುಮಾರಿಗೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಗುತ್ತೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಅರಣ್ಯಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಲಿದ್ದಾರೆ. ಇಂದು ಸಂಜೆ ವೇಳೆಗೆ ಆನೆಗಳು ಅರಮನೆ ಸೇರಲಿವೆ. ಅಭಿಮನ್ಯು ಈ ಬಾರಿ ಅಂಬಾರಿ ಹೊರಲಿದ್ದಾನೆ. ಇಲ್ಲಿಗೆ ಬಂದ ಮೇಲೆ ಎಂದಿನಂತೆ ಒಂದಿಷ್ಟು ತಾಲೀಮು ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!