ದಸರಾಗೆ ಚಾಲನೆ ನೀಡಿದ ನಾದಬ್ರಹ್ಮ

185

ಪ್ರಜಾಸ್ತ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇಂದು ಚಾಲನೆ ನೀಡಿದರು. ಚಾಮುಂಡಿ ಬೆಟ್ಟದ ವೇದಿಕೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವ ಹೆಚ್.ಸಿ ಮಹಾದೇವಪ್ಪ ಸೇರಿ ಅನೇಕ ಗಣ್ಯರಿದ್ದರು.

ಇಂದಿನಿಂದ 9 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಈಗಾಗ್ಲೇ ಎಂದಿನಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ವಿಜಯ ದಶಮಿ ದಿನದಂದು ಅಂಬಾರಿ ಮೆರವಣಿಗೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!