ಮೈಸೂರು: ದಸರಾ ಆಚರಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗ್ತಿದೆ. ಈಗಾಗ್ಲೇ ಯುವ ಸಂಭ್ರಮ ಶುರುವಾಗಿದೆ. ಹೀಗಾಗಿ ಮೈಸೂರಿನಲ್ಲಿ ನವರಾತ್ರಿಯ ಹಬ್ಬದ ಕಳೆ ಬಂದಿದೆ. ಇಂದಿನ ಶುಭ ಲಗ್ನದಲ್ಲಿ ಅರಮನೆಯ ದರ್ಬಾರ್ ಹಾಲ್ ನಲ್ಲಿ ಚಿನ್ನದ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ.
ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಚಿನ್ನದ ಸಿಂಹಾಸನ ಜೋಡಣಾ ಕಾರ್ಯ ನಡೆಯಲಿದೆ. ಹೀಗಾಗಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ತನಕ ಸಾರ್ವಜನಿಕರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.