ದಸರಾ ಕವಿಗೋಷ್ಠಿಗೆ ಡಾ.ಸತ್ಯಮಂಗಲ ಮಹಾದೇವ ಆಯ್ಕೆ

331

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ-2022ರ ಯುವ ಕವಿಗೋಷ್ಟಿಗೆ ತುಮಕೂರು ಮೂಲದ ನಾಡಿನ ಹೆಸರಾಂತ ಸಾಹಿತಿ ಡಾ.ಸತ್ಯಮಂಗಲ ಮಹಾದೇವ ಕವಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಯುವ ಕವಿಗೋಷ್ಟಿಯು ಸೆಪ್ಟೆಂಬರ್ 30ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ರಾಣಿ ಬಹದ್ದೂರ್   ಸಭಾಂಗಣ, ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ನಾಡಿನ ಹಿರಿಯ ಕವಿಗಳಾದ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ಅವರು ಕವಿಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಹೆಸರಾಂತ ವಿಮರ್ಶಕರಾದ ಡಾ.ಮಂಗಳಾ ಪ್ರಿಯದರ್ಶಿನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ವಿಧಾನ ಸಭಾಕ್ಷೇತ್ರದ ಮಾನ್ಯ ಶಾಸಕರಾದ ಜಿ.ಟಿ ದೇವೇಗೌಡ ಅವರು ಕವಿಗೋಷ್ಟಿ ಉದ್ಘಾಟಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!