ಮೈಸೂರ ದಸರಾ, ಕಮಿಷನ್ ಆರೋಪ: ಈಶ್ವರಪ್ಪ ವಾಗ್ದಾಳಿ

174

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಮೈಸೂರು ದಸರಾ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಸರೋದ ವಾದಕ ಪಂಡಿತ ರಾಜೀವ್ ತಾರಾನಾಥ್ ಅವರ ಬಳಿ ಅಧಿಕಾರಿಗಳು ಕಮಿಷನ್ ಕೇಳಿದ ಆರೋಪ ಕೇಳಿ ಬಂದಿದೆ.

ಕಾರ್ಯಕ್ರಮಕ್ಕೆ 5 ಲಕ್ಷ ರೂಪಾಯಿ ಬದಲು 8 ಲಕ್ಷ ಕೇಳಿ. 5 ಲಕ್ಷ ನೀವು ತೆಗೆದುಕೊಳ್ಳಿ. 3 ಲಕ್ಷ ನಮಗೆ ಕೊಡಿ ಎಂದು ಕೇಳಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಕಲಾವಿದರ ಬಳಿ ಕಮಿಷನ್ ಕೇಳುವ ಮೂಲಕ ಅವಮಾನ ಮಾಡುತ್ತಿದ್ದಾರೆ. ಕಮಿಷನ್ ಕೇಳಿದವರಿಗೆ, ಅವರ ಮಕ್ಕಳಿಗೆ ಲಕ್ವಾ ಹೊಡೆದು ಸಾಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರೆ.

ಕಮಿಷನ್ ಆಟಕ್ಕೆ ಮೊದಲು ಕಡಿವಾಣ ಹಾಕಬೇಕು. ಆದರೆ, ಉಡಾಫೆ ಮಾಡುವ ಇಂತಹ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕರ್ನಾಟಕ ಎಂದೂ ಕಂಡಿರಲಿಲ್ಲ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!