ಪ್ರಜಾಸ್ತ್ರ ಸುದ್ದಿ
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೊಸದೊಂದು ಆದೇಶ ಹೊರಡಿಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದ್ರಿಂದ, ಮೈಸೂರಿಗೆ ಬರುವವರು ಕೋವಿಡ್ ನೆಗೆಟಿವ್ ವರದಿ ತರಬೇಕು ಎಂದಿದ್ದಾರೆ.
ಮೈಸೂರು ಪ್ರವಾಸಿ ತಾಣವಾಗಿದೆ. ಜೊತೆಗೆ ಬೆಂಗಳೂರಿನಿಂದ ನಿತ್ಯ ವ್ಯಾಪಾರ ವಹಿವಾಟಿಗಾಗಿಯೂ ಜನರು ಓಡಾಟ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕಳೆದ 72 ಗಂಟೆಗಳ ಕರೋನಾ ನೆಗೆಟಿವ್ ವರದಿ ತರಬೇಕು ಎಂದಿದ್ದಾರೆ.