ಪ್ರಜಾಸ್ತ್ರ ಸುದ್ದಿ
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಸ್ವಪಕ್ಷದವರಿಂದಲೇ ತಪ್ಪಿತು ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಓರ್ವ ನಾಯಕನಿಗೆ ಹಿನ್ನಡೆ ಮಾಡಬೇಕೆಂದು ಹೀಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಹೇಳಿಕೆ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ವಿರುದ್ಧ ಎನ್ನಲಾಗ್ತಿದೆ. ಇನ್ನು ಕಾಂಗ್ರೆಸ್ ಪಕ್ಷವನ್ನ ಹಿಂದು ವಿರೋಧಿ ಎನ್ನುತ್ತಾರೆ. ಹಿಂದು ಧರ್ಮವೇ ಬೇರೆ. ಹಿಂದುತ್ವವೇ ಬೇರೆ. ಹೀಗಾಗಿ ಕಾಂಗ್ರೆಸ್ ಹಿಂದು ಧರ್ಮದ ವಿರೋಧಿಯಲ್ಲವೆಂದರು.